ಆತ್ರಾಡಿ- ಮಂಗಳೂರು ರಾಜ್ಯ ಹೆದ್ದಾರಿ ಕಾಮಗಾರಿ ವೀಕ್ಷಣೆ
Sunday, June 1, 2025
ಲೋಕಬಂಧು ನ್ಯೂಸ್, ಕಾಪು
ಆತ್ರಾಡಿ- ಮಂಗಳೂರು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಜೂನ್ 1ರಂದು ಭಾನುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.ಗುಣಮಟ್ಟ ಕಾಯ್ದುಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಪ್ರವೀಣ್ ಪೂಜಾರಿ, ಶ್ರೀಕಾಂತ ಕಾಮತ್, ಸುಂದರ ಮೂಲ್ಯ, ವಾಸುದೇವ ಭಟ್, ವಿರೇಂದ್ರ ಪೂಜಾರಿ, ಹರೀಶ್ ಕುಲಾಲ್, ದಿನೇಶ್ ಕುಮಾರ್ ಪಟ್ಲ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಸೋಮನಾಥ ಮೊದಲಾದವರಿದ್ದರು.