-->
ಇಂದಿರಾ ಕ್ಯಾಂಟೀನ್ ನಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ

ಇಂದಿರಾ ಕ್ಯಾಂಟೀನ್ ನಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ

ಲೋಕಬಂಧು ನ್ಯೂಸ್, ಉಡುಪಿ
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ನೇತೃತ್ವದಲ್ಲಿ ಗುರುವಾರ ಮಣಿಪಾಲದ ಇಂದಿರಾ ಕ್ಯಾಂಟನ್'ನಲ್ಲಿ ಕೇಕ್ ಕತ್ತರಿಸಿ, ಅಲ್ಲಿಯೇ ಉಪಾಹಾರ ಸೇವಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.
ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದಾರೆ. ದೇಶದಲ್ಲಿ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕಾಳಜಿ ವ್ಯಕ್ತಪಡಿಸುವುದರೊಂದಿಗೆ ದೇಶದಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಸಾರಿಕೊಂಡು ಬಂದಿರುತ್ತಾರೆ. ಕಾಲ್ನಡಿಗೆ ಮೂಲಕ ದೇಶದಾದ್ಯಂತ ಸಂಚರಿಸಿ ದ್ವೇಷ ಅಳಿಸಿ ಪ್ರೀತಿಯ ಸಂದೇಶ ಪ್ರಚುರಪಡಿಸುವ ಬಹುದೊಡ್ಡ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದರು.


ಮುಂದಿನ ದಿನಗಳಲ್ಲಿ ಅವರು ದೇಶದ ಚುಕ್ಕಾಣಿ ಹಿಡಿಯಲಿ ಎಂದವರು ಆಶಿಸಿದರು.


ಈ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಇಂದಿರಾ ಕ್ಯಾಂಟನ್ ಗೆ ಇನ್ನಷ್ಟು ಪ್ರಚಾರ ಸಿಗಬೇಕೆಂಬ ಆಶಯದಿಂದ ಸ್ಥಳೀಯ ರಿಕ್ಷಾ ಚಾಲಕರೊಂದಿಗೆ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಮೀನುಗಾರ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಎನ್ಎಸ್.ಯು.ಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್, ಮುಖಂಡರಾದ ಮುರಳಿ ಶೆಟ್ಟಿ, ಅಮೃತ್ ಶೆಣೈ, ಸುಕೇಶ್ ಆಚಾರ್ಯ, ಹಮ್ಮದ್, ನವೀನ್ ಸಾಲಿಯಾನ್, ಯಾದವ ಅಮೀನ್, ಸದಾನಂದ ಮೂಲ್ಯ, ಸತೀಶ್ ಕೊಡವೂರು, ರಮೇಶ್ ತಿಂಗಳಾಯ, ರಾಮಪ್ಪ ಸಾಲಿಯಾನ್, ರೋಶನ್ ಶೆಟ್ಟಿ, ಪ್ರದೀಪ್ ಸ್ಯಾಮುಯೆಲ್, ಅಬೂಬಕರ್, ಖಾಸಿಂ ಮತ್ತು ರಹೀಮ್, ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article