-->
ಶ್ರೀಕಾಂತ ಪೂಜಾರಿ ಬಿರಾವು ಮೈ ಭಾರತ್ ರಾಯಭಾರಿ

ಶ್ರೀಕಾಂತ ಪೂಜಾರಿ ಬಿರಾವು ಮೈ ಭಾರತ್ ರಾಯಭಾರಿ

ಲೋಕಬಂಧು ನ್ಯೂಸ್, ಪುತ್ತೂರು
ನವದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ನವದೆಹಲಿಯ ಮೈ ಭಾರತ್ ಯುವ ರಾಯಭಾರಿಯಾಗಿ ಪುತ್ತೂರು ತಾಲೂಕಿನ ಶ್ರೀಕಾಂತ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿಧಿಸಲಿದ್ದಾರೆ.ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ವತಿಯಿಂದ ದೇಶದ ಪ್ರತೀ ರಾಜ್ಯದಿಂದ 15 ವರ್ಷದಿಂದ 28 ವರ್ಷ ವಯೋಮಿತಿ ವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, ಕರ್ನಾಟಕ ರಾಜ್ಯದಿಂದ ಈ ಬಾರಿ ಶ್ರೀಕಾಂತ್ ಬಿರಾವು ವಿಶೇಷ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳೂರು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಹಾಗೂ ಆಡಳಿತಾಧಿಕಾರಿ ಜಗದೀಶ್ ತಿಳಿಸಿದ್ದಾರೆ.


ಶ್ರೀಕಾಂತ್ ಬಿರಾವು ಹಲವಾರು ವರ್ಷಗಳಿಂದ ಯುವ ಜನರ ಸಬಲೀಕರಣದಲ್ಲಿ ತೊಡಗಿಕೊಂಡಿದ್ದು ಯುವ ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500ಕ್ಕೂ ಅಧಿಕ ಕಾರ್ಯಕ್ರಮ ನೀಡಿದ್ದು, ಸುಮಾರು 90 ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯ ಕುರಿತು ಶಾಲಾ ಕಾಲೇಜು, ಯುವಕ ಯುವತಿ ಮಂಡಲಗಳಲ್ಲಿ ತರಬೇತಿ ನೀಡಿದ್ದಾರೆ.


ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳ ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೆರವಾಗಿದ್ದಾರೆ. ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ, ಮಾದಕ ವ್ಯಸನ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.


ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿದ್ದಾರೆ.


ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ‌ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರರಾಗಿದ್ದಾರೆ.


ಅಂತಾರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್‌ ನೇಷನ್ಸ್ ಡೆವಲಪ್‌ಮೆಂಟ್ ‌ಪ್ರೋಗ್ರಾಮ್ ನ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿದ್ದಾರೆ.


ಯುನೈಟೆಡ್ ನೇಷನ್ಸ್ ಇಂಟರ್ ನ್ಯಾಷನಲ್ ಚಿಲ್ಡ್ರನ್ ಫಂಡ್ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರಿನ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ.


ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರಾಗಿದ್ದು, ಹಲವಾರು ಪತ್ರಿಕೆಗಳಲ್ಲಿ ಲೇಖನ ಪ್ರಕಟಗೊಂಡಿವೆ.


ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ, ರಾಜ್ಯ ಯುವಜನ ಒಕ್ಕೂಟದಿಂದ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್, ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.


ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ. ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂಮ ಕಾಲೇಜು ಕೊಂಬೆಟ್ಟು, ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.


ಆಗಸ್ಟ್ 15ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ವಿಶೇಷ ಯುವ ರಾಯಭಾರಿಯಾಗಿ ಭಾಗವಹಿಸಲಿದ್ದಾರೆ.

Ads on article

Advertise in articles 1

advertising articles 2

Advertise under the article