ಕೆಲಸ ನಿರ್ವಹಿಸಿದ್ದ ಬ್ಯಾಂಕಿನಲ್ಲೇ ಆತ್ಮಹತ್ಯೆ!
Thursday, June 26, 2025
ಲೋಕಬಂಧು ನ್ಯೂಸ್, ಮಂಗಳೂರು
ನಗರದ ರಾಮಭವನ ಕಾಂಪ್ಲೆಕ್ಸ್ನ ನೆಲ ಮಹಡಿಯ ಕೆನರಾ ಬ್ಯಾಂಕ್ನ ಸ್ಟೋರ್ ರೂಮ್ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಅಳಕೆ ನಿವಾಸಿ ಗಿರಿಧರ ಯಾದವ್ (61) ಎಂದು ಗುರುತಿಸಲಾಗಿದೆ.
ಅವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕಿನಲ್ಲಿ ಸುಮಾರು 40 ವರ್ಷ ಕಾಲ ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ್ದು, ಇತ್ತೀಚೆಗೆ ನಿವೃತ್ತಿ ಹೊಂದಿದ್ದರು.
ಬ್ಯಾಂಕಿನ ಮೇಲಿನ ಪ್ರೀತಿಗೆ ಪ್ರತಿದಿನ ಬ್ಯಾಂಕಿಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ಜೂ.25ರಂದು ಬ್ಯಾಂಕ್ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ.
ಆ ಹಿನ್ನೆಲೆಯಲ್ಲಿ ಗಿರಿಧರ್ ಪತ್ನಿ ಬಂದರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಗುರುವಾರ ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ನ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಕಂಡು ಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಗಿರಿಧರ ಯಾದವ್ ರಾಜ್ಯ ಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.