-->
ವಿಜಯೇಂದ್ರ ಕ್ರಿಯಾಶೀಲ ನಾಯಕ

ವಿಜಯೇಂದ್ರ ಕ್ರಿಯಾಶೀಲ ನಾಯಕ

ಲೋಕಬಂಧು ನ್ಯೂಸ್, ಯಾದಗಿರಿ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ವಿಜಯೇಂದ್ರ ಅವರೊಬ್ಬ ಕ್ರಿಯಾಶೀಲ ಅಧ್ಯಕ್ಷ ಎಂದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕನ ಬದಲಾವಣೆ ಸೇರಿದಂತೆ ಯಾರ ಬದಲಾವಣೆಯೂ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ. ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ರಾಜ್ಯಾಧ್ಯಕ್ಷರು ಹೋಗಿ ಬರುತ್ತಾರೆ. ಅದಕ್ಕೆ ಬೇರೆ ಕಲ್ಪನೆ ಕಟ್ಟುವುದು ಬೇಡ ಎಂದರು.


ಇನ್ನೂ 2-3 ತಿಂಗಳಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ‌ ಮುಳುಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.

Ads on article

Advertise in articles 1

advertising articles 2

Advertise under the article