ವಿದ್ಯಾರ್ಥಿ ನಿಲಯಗಳಿಗೆ ಭೇಟಿ
Saturday, June 21, 2025
ಲೋಕಬಂಧು ನ್ಯೂಸ್, ಉಡುಪಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಮಣಿಪಾಲದ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಾಧಿಕಾರಿ ರಶ್ಮಿ, ಅಲ್ಪ ಸಂಖ್ಯಾತ ಇಲಾಖೆ ಅಧಿಕಾರಿ ರೋಹಿಣಿ ಇದ್ದರು.