ಲೋಕಬಂಧು ನ್ಯೂಸ್, ಮಂಗಳೂರು
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜು.24ರಂದು ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.
ಉಳಿದಂತೆ ಪದವಿ, ಐಟಿಐ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ.