-->
Udupi: ಪಂಚಮುಖಿ ಗಾಯತ್ರಿದೇವಿ ದೃಢಕಲಶಾಭಿಷೇಕ ಸಂಪನ್ನ

Udupi: ಪಂಚಮುಖಿ ಗಾಯತ್ರಿದೇವಿ ದೃಢಕಲಶಾಭಿಷೇಕ ಸಂಪನ್ನ

ಲೋಕಬಂಧು ನ್ಯೂಸ್, ಉಡುಪಿ
ದೊಡ್ಡಣಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿರುವ ಶ್ರೀ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾ ದೃಢಕಲಶಾಭಿಷೇಕ ಮಹೋತ್ಸವ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು.
ದೃಢ ಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು ರಾಕ್ಷೋಘ್ನಾದಿ ಪ್ರಕ್ರಿಯೆಗಳು, ಸಪ್ತ ಶುದ್ಧಿ, ಪ್ರಾಸಾದ ಶುದ್ಧಿ, ಕಲಶಾಧಿವಾಸ ಪ್ರಕ್ರಿಯೆಗಳು ನೆರವೇರಿತು.


ಪ್ರಾತಃಕಾಲ ತ್ರಿನಾರಿಕೇಳ ಗಣಯಾಗ,ಪ್ರಧಾನ ಯಾಗ ಬಳಿಕ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವನ್ನು ಸರ್ವೇಶ ತಂತ್ರಿ ನೆರವೇರಿಸಿದರು.
ನಂತರ ವ್ಯಾಸ ಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ಪ್ರಸನ್ನಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು.


ಪ್ರಸನ್ನಾಕ್ಷಿಯ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ, ಕಲಶ ಅಭಿಷೇಕವನ್ನು ವರ್ಧಂತಿ ಮಹೋತ್ಸವ ಪ್ರಯುಕ್ತ ಗಣೇಶ ಸರಳಾಯ ನೆರವೇರಿಸಿದರು.


ವಿಖ್ಯಾತ್ ಭಟ್ ಧಾರ್ಮಿಕ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಎಂದು ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article