-->
Malpe: ಗಣೇಶೋತ್ಸವದಲ್ಲಿ ಕ್ರೈಸ್ತರು ಭಾಗಿ

Malpe: ಗಣೇಶೋತ್ಸವದಲ್ಲಿ ಕ್ರೈಸ್ತರು ಭಾಗಿ

ಲೋಕಬಂಧು ನ್ಯೂಸ್, ಮಲ್ಪೆ
ಸಮನ್ವಯ ಸರ್ವ ಧರ್ಮ ಸಮಿತಿ ತೊಟ್ಟಂ ಹಾಗೂ ತೊಟ್ಟಂ ಸಂತ ಅನ್ನಮ್ಮ ಚರ್ಚ್ ವತಿಯಿಂದ ಇಲ್ಲಿಗೆ ಸಮೀಪದ ತೊಟ್ಟಂನಲ್ಲಿ ನಡೆಸಲಾದ ಸಾರ್ವಜನಿಕ ಗಣೇಶೋತ್ಸವದಲ್ಲಿ ಚರ್ಚ್ ಧರ್ಮಗುರುಗಳು ಹಾಗೂ ಕ್ರೈಸ್ತರು ಭಾಗವಹಿಸಿದ್ದರು.

ಸಂತ ಅನ್ನಮ್ಮ ಚರ್ಚ್ ಧರ್ಮಗುರು ಫಾ.ಡೆನಿಸ್ ಡೆಸಾ ಹಾಗೂ ಸಮನ್ವಯ ಸರ್ವ ಧರ್ಮ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ ಕಾರ್ಯಕ್ರಮದ ನೇತೃತ್ವ ವಹಿಸಿದ್ದು ಪರಸ್ಪರ ಗಣೇಶ ಚತುರ್ಥಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ವಂ.ಡೆನಿಸ್ ಡೆಸಾ, ತೊಟ್ಟಂ ಪರಿಸರ ಸರ್ವ ಧರ್ಮಗಳ ಸೌಹಾರ್ದತೆಯ ತಾಣವಾಗಿದ್ದು ಪ್ರತಿವರ್ಷ ಸಮಿತಿಯ ಸದಸ್ಯರೊಡಗೂಡಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪರಸ್ಪರ ಸಹೋದರರಂತೆ ಭಾಗಿಯಾಗಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರೂ ಚರ್ಚಿನ ವಿವಿಧ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ.


ಆ ಮೂಲಕ ಸೌಹಾರ್ದತೆ ಕೇವಲ ಬಾಯಿಮಾತಿಗೆ ಸೀಮಿತವಾಗಿರದೆ ಕೃತಿ ಮೂಲಕ ತೋರ್ಪಡಿಸುತ್ತಾರೆ. ಚರ್ಚಿನ ವಾರ್ಷಿಕ ಮಹೋತ್ಸವ ಹಾಗೂ ತೆನೆ ಹಬ್ಬದ ಸಂದರ್ಭದಲ್ಲಿ ಸಮಿತಿಯ ವೇದಿಕೆಯಲ್ಲಿ ಚರ್ಚಿನ ಕಾರ್ಯಕ್ರಮಕ್ಕೆ ಅನುವು ಮಾಡಿಕೊಡುತ್ತಿದ್ದಾರೆ ಎಂದರು.


ತೊಟ್ಟಂ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷೆ ಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಸಂತ ಅನ್ನಮ್ಮ ಕಾನ್ವೆಂಟಿನ ಸಿಸ್ಟರ್ ಸುಷ್ಮಾ, ಸಿಸ್ಟರ್ ಶಾಲಿನಿ, ಸಿಸ್ಟರ್ ಲೂಸಿ, ಅಂತರ ಧರ್ಮೀಯ ಸಂವಾದ ಆಯೋಗದ ಸಂಚಾಲಕ ಆಗ್ನೆಲ್ ಫೆರ್ನಾಂಡಿಸ್, ಪದಾಧಿಕಾರಿಗಳಾದ ಓನಿಲ್ ಡಿ'ಸೋಜಾ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಕೆ. ಸಾಲ್ಯಾನ್, ಕಾರ್ಯಾಧ್ಯಕ್ಷ ಯತಿರಾಜ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಯೋಗಿಶ್ ಕುಮಾರ್, ಕೋಶಾಧಿಕಾರಿ ರಮೇಶ್ ತೊಟ್ಟಂ, ಪದಾಧಿಕಾರಿಗಳಾದ ರಮೇಶ್, ದಯೇಶ್ ಕಾಂಚನ್, ನವೀನ್ ಕುಂದರ್, ನವೀನ್ ಬೈಲಕೆರೆ, ಶ್ರೀಧರ ತೊಟ್ಟಂ, ಸಂತೋಷ್ ಕುಮಾರ್ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article