Mangalore: ತಲಪಾಡಿಯಲ್ಲಿ ಭೀಕರ ಅಪಘಾತ: ಆರು ಸಾವು
Thursday, August 28, 2025
ಲೋಕಬಂಧು ನ್ಯೂಸ್, ಮಂಗಳೂರು
ತಲಪಾಡಿ ಬಳಿ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ಹಿಮ್ಮುಖವಾಗಿ ಚಲಿಸಿ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.ಗುರುವಾರ ಮಧ್ಯಾಹ್ನದ ವೇಳೆಗೆ ತಲಪಾಡಿಯ ಮೇಲಿನಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಕೆಸಿ ರೋಡ್ ಮೂಲದವರೆಂದು ತಿಳಿದುಬಂದಿದೆ. ಘಟನೆ ಮಧ್ಯಾಹ್ನ 1.30ರ ಸುಮಾರಿಗೆ ನಡೆದಿದ್ದು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ.
ಅಲ್ಲದೆ ಒಂದು ಮಗು ಕೂಡಾ ಸಾವನ್ನಪ್ಪಿದೆ. ಅಪಘಾತದ ಸಮಯದಲ್ಲಿ ಆಶ್ರಯ ನಿಲ್ದಾಣದ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿ ಕೆಲವರು ಕುಳಿತಿದ್ದರು. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.