-->
scouts ಚಟುವಟಿಕೆಯಲ್ಲಿ ಯೋಗ ಅಳವಡಿಕೆಗೆ ಚಿಂತನೆ

scouts ಚಟುವಟಿಕೆಯಲ್ಲಿ ಯೋಗ ಅಳವಡಿಕೆಗೆ ಚಿಂತನೆ

ಲೋಕಬಂಧು ನ್ಯೂಸ್, ಉಡುಪಿ
ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದ್ದು, ಅದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್​ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ ಹೇಳಿದರು.
ನಗರದ ಬೋರ್ಡ್​ ಹೈಸ್ಕೂಲ್'ನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್​ ಸೌಟ್ ಮತ್ತು ಗೈಡ್ಸ್​ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಸೋಮವಾರ ಆಯೋಜಿಸಿದ್ದ ರೋವರಿಂಗ್​ ಮತ್ತು ರೇಂಜರಿಂಗ್​ ಪ್ರಾರಂಭಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.


ರೋವರ್ಸ್​ ಮತ್ತು ರೇಂಜರ್'ಗಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ಕಮ್ಯುನಿಷ್ಟ್​ ರಾಷ್ಟ್ರಗಳಲ್ಲಿ ಜನರು ಶಿಸ್ತು ಮತ್ತು ಸಮಯಪ್ರಜ್ಞೆ ಅಳವಡಿಸಿಕೊಂಡಿದ್ದರಿಂದ ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದರು.


ಜಿಲ್ಲೆಯ ಮುತ್ಸದ್ದಿ ರಾಜಕಾರಣಿ ಡಾ. ವಿ.ಎಸ್.ಆಚಾರ್ಯ ಭಾರತ್​ ಸ್ಕೌಟ್ಸ್ ಮತ್ತು ಗೈಡ್ಸ್​ ಸಂಸ್ಥೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಎಲ್ಲಾ ಕಾಲೇಜುಗಳಲ್ಲಿ ಭಾರತ್​ ಸ್ಕೌಟ್ಸ್ ಮತ್ತು ಗೈಡ್ಸ್​ ಕಡ್ಡಾಯಗೊಳಿಸಿದ್ದರು ಎಂದು ಸ್ಮರಿಸಿದರು.


ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಂಟನಾ ಆಯುಕ್ತ ಎಂ.ಪ್ರಭಾಕರ ಭಟ್​,  ಡಿಡಿಪಿಯು ಮಾರುತಿ, ಪ.ಪೂ.ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ವರ್ಗೀಸ್​ ಪಿ., ಜಿಲ್ಲಾ ಸ್ಕೌಟ್ಸ್​ ಆಯುಕ್ತ ಜನಾರ್ದನ ಕೊಡವೂರು, ಗೈಡ್ಸ್​ ಆಯುಕ್ತೆ ಜ್ಯೋತಿ ಪೈ, ಖಜಾಂಚಿ ಹರಿಪ್ರಸಾದ್​ ರೈ, ಶಿಬಿರ ನಾಯಕ ಗುರುಮೂರ್ತಿ,  ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ರಾಜ್ಯ ಸಂಘಟನಾ ಸಹ ಕಾರ್ಯದರ್ಶಿ ಸುಮನ ಶೇಖರ್, ಕಾಲೇಜು ಪ್ರಾಂಶುಪಾಲೆ ಲೀಲಾವತಿ ಮೊದಲಾದವರಿದ್ದರು.


ಉದಯ ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಹರೀಶ್ ವಂದಿಸಿದರು.

Ads on article

Advertise in articles 1

advertising articles 2

Advertise under the article