-->
Udupi: ಬನ್ನಂಜೆ ನಾರಾಯಣ ಗುರು ಸಂಚಾರ ವೃತ್ತ ತೆರವು: ಬಿಲ್ಲವರ ಆಕ್ರೋಶ

Udupi: ಬನ್ನಂಜೆ ನಾರಾಯಣ ಗುರು ಸಂಚಾರ ವೃತ್ತ ತೆರವು: ಬಿಲ್ಲವರ ಆಕ್ರೋಶ

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ  ನಾರಾಯಣ ಗುರು ಸಂಚಾರ ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಅಲ್ಲಿಂದ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದ್ದು, ಅದಕ್ಕಾಗಿ ಬಿಲ್ಲವರು ಆಕ್ರೋಶಗೊಂಡಿದ್ದಾರೆ.
ನಾರಾಯಣ ಗುರು ಹೆಸರಿನ ಸಂಚಾರ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕದ ಸಂಚಾರ ವೃತ್ತ ರಚಿಸಿದ್ದು ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ. ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ತೀವ್ರವಾಗಿ ಖಂಡಿಸುತ್ತದೆ.
ಸ್ಥಳೀಯಾಡಳಿತ ತಕ್ಷಣ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಇಲ್ಲವಾದ್ದಲ್ಲಿ ಸಮಸ್ತ ಬಿಲ್ಲವ ಸಮಾಜವನ್ನು ಒಗ್ಗೂಡಿಸಿಕೊಂಡು  ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಮ್. ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article