-->
Udupi: ಆಡಳಿತಾತ್ಮಕ ನ್ಯಾಯಮೂರ್ತಿಗೆ ಅಭಿನಂದನೆ

Udupi: ಆಡಳಿತಾತ್ಮಕ ನ್ಯಾಯಮೂರ್ತಿಗೆ ಅಭಿನಂದನೆ

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿ ಇತ್ತೀಚೆಗೆ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನು ಉಡುಪಿ ವಕೀಲರ ಸಂಘದ ನಿಯೋಗ ಶುಕ್ರವಾರ ಭೇಟಿಯಾಗಿ ಅವರನ್ನು ಅಭಿನಂದಿಸಿತು.
ಶೀಘ್ರದಲ್ಲಿ ಉಡುಪಿ ವಕೀಲರ ಸಂಘಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿತು.


ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಖಜಾಂಚಿ ಗಂಗಾಧರ ಎಚ್.ಎಂ., ಹಿರಿಯ ವಕೀಲ ಜಯಕೃಷ್ಣ ಆಳ್ವ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಪ್ರಜ್ವಲ್ ಶೆಟ್ಟಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article