-->
Udupi: ಉಚಿತ ವ್ಹೀಲ್ ಚೆಯರ್ ಕೊಡುಗೆ

Udupi: ಉಚಿತ ವ್ಹೀಲ್ ಚೆಯರ್ ಕೊಡುಗೆ

ಲೋಕಬಂಧು ನ್ಯೂಸ್, ಉಡುಪಿ
ಇಲ್ಲಿನ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಮತ್ತು ಉಡುಪಿ ರೈಲ್ವೆ ಯಾತ್ರಿ ಸಂಘ ವತಿಯಿಂದ ಅಶಕ್ತ ರೈಲ್ವೆ ಪ್ರಯಾಣಿಕರ ಉಪಯೋಗಕ್ಕಾಗಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಗಾಲಿ ಕುರ್ಚಿ (ವ್ಹೀಲ್ ಚೆಯರ್)ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸೊಸೈಟಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಸಾಂಕೇತಿಕವಾಗಿ ಸ್ಟೇಷನ್ ಮಾಸ್ಟರ್ ನಾಗರಾಜ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.


ಸೊಸೈಟಿ ಮಹಾಪ್ರಬಂಧಕ ರಾಜೇಶ್ ಹೆಗ್ದೆ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಧೀರಜ್ ಶಾಂತಿ, ಉಪಾಧ್ಯಕ್ಷ ಮಧುಸೂದನ ಹೇರೂರು,  ನಿರ್ದೇಶಕರಾದ ತೋನ್ಸೆ ಶ್ರೀನಿವಾಸ ಶೆಟ್ಟಿ, ಜಾನ್ ರೆಬೆಲ್ಲೊ, ಜನಾರ್ದನ ಕೋಟ್ಯಾನ್, ರವಿ ಪೂಜಾರಿ ಹಿರಿಯಡ್ಕ ಮತ್ತು ರವೀಶ್ ಕೋಟ್ಯಾನ್, ರೈಲ್ವೆ  ಕಮರ್ಷಿಯಲ್ ಇನ್ ಚಾರ್ಜ್ ಸತ್ಯನಾರಾಯಣ ಭಟ್ ಮೊದಲಾದವರಿದ್ದರು.


ಮಂಜುನಾಥ್ ಮಣಿಪಾಲ್ ಕಾರ್ಯಕ್ರಮ ಸಂಯೋಜಿಸಿದರು.

Ads on article

Advertise in articles 1

advertising articles 2

Advertise under the article