
Padubidri: ಉಚ್ಚಿಲಕ್ಕೆ ಶೀರೂರುಶ್ರೀ ಭೇಟಿ
Friday, September 19, 2025
ಲೋಕಬಂಧು ನ್ಯೂಸ್, ಪಡುಬಿದ್ರಿ
ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿ, ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ವತಿಯಿಂದ ಶ್ರೀಗಳಿಗೆ ಪೂರ್ಣಕುಂಭ ಸಹಿತ ಭಕ್ತಿಪೂರ್ವಕ ಸ್ವಾಗತ ಕೋರಲಾಯಿತು.
ಕ್ಷೇತ್ರದ ಅಭಿವೃದ್ಧಿಯ ರೂವಾರಿ ನಾಡೋಜ ಡಾ.ಜಿ.ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಪ್ರಮುಖರಾದ ಗಿರಿಧರ್ ಸುವರ್ಣ, ಗುಂಡು ಬಿ.ಅಮೀನ್, ಸುಧಾಕರ್ ಕುಂದರ್, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಶೈಲಜ ಪುತ್ರನ್ ಮೊದಲಾದವರಿದ್ದರು.