
Padubidri: ಉಚ್ಚಿಲ ದಸರಾ: ನಗರಾಲಂಕಾರಕ್ಕೆ ಚಾಲನೆ
Sunday, September 21, 2025
ಲೋಕಬಂಧು ನ್ಯೂಸ್, ಪಡುಬಿದ್ರಿ
ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ವಸ್ಥಾನದಲ್ಲಿ ಸೆ. 22ರಿಂದ ಅ.2ರ ವರೆಗೆ ನಡೆಯುವ ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ವೈವಿಧ್ಯಮಯ ವಿದ್ಯುದ್ದೀಪಗಳ ನಗರಾಲಂಕಾರವನ್ನು ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ ಡಾ. ಜಿ. ಶಂಕರ್ ಉದ್ಘಾಟಿಸಿದರು.
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ರಥಬೀದಿ, ಶಾಲಿನಿ ಜಿ. ಶಂಕರ್ ತೆರೆದ ವೇದಿಕೆಯ ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡುಬಿದ್ರಿಯಿಂದ ಕಾಪು ಉಚ್ಚಿಲದಿಂದ ಪಡುಬಿದ್ರಿ ವರೆಗೆ ಪಡುಬಿದ್ರಿಯಿಂದ ಕಾಪು ಬೀಚ್ ವರೆಗೆ ದೀಪಾಲಂಕಾರ ಮಾಡಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ ಮತ್ತು ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನಿಲ್, ಉದ್ಯಮಿಗಳಾದ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಮೊದಲಾದವರಿದ್ದರು.