-->
Ujire: ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

Ujire: ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಲೋಕಬಂಧು ನ್ಯೂಸ್, ಉಜಿರೆ
ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಫಲಕಾಣಿಕೆ ನೀಡಿ ಗೌರವಿಸಿದರು.


ಸ್ವಾಮೀಜಿಯವರು ಹೆಗ್ಗಡೆಯವರಿಗೆ ಪ್ರಸಾದ ನೀಡಿ ಶುಭ ಹಾರೈಸಿದರು.


ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


ದೇವರ ದರ್ಶನದ ಬಳಿಕ ಸುಬ್ರಹಣ್ಯಕ್ಕೆ ಮರುಪ್ರಯಾಣ ಮಾಡಿದರು

Ads on article

Advertise in articles 1

advertising articles 2

Advertise under the article