ಲೋಕಬಂಧು ನ್ಯೂಸ್, ಬೆಳಗಾವಿ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಲ್ಲಿನ ಮಾಲಿನಿ ಸಿಟಿ ಬಳಿ ಮಂಗಳವಾರ ಬೃಹತ್ ಸಮಾವೇಶ ನಡೆಸಿದ ಬಿಜೆಪಿ ನಾಯಕರು, ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಆದರೆ, ಪೊಲೀಸರು ಅತ್ಯಂತ ಬಿಗಿ ಭದ್ರತೆ ಕೈಗೊಂಡು, ಮುತ್ತಿಗೆ ಯತ್ನ ವಿಫಲಗೊಳಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ನೂರಾರು ಪ್ರಮುಖ ನಾಯಕರನ್ನು ವಶಕ್ಕೆ ಪಡೆದರು.


