ಲೋಕಬಂಧು ನ್ಯೂಸ್, ಉಡುಪಿ
ಜಾತ್ಯತೀತ ಜನತಾದಳ (ಜೆಡಿಎಸ್) ಉಡುಪಿ ಜಿಲ್ಲಾಧ್ಯಕ್ಷರಾಗಿ ಯೋಗೇಶ್ ವಿ. ಶೆಟ್ಟಿ ಸತತ ಮೂರನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆದೇಶದಂತೆ ಜೆಡಿಎಸ್ ಕೋರ್ ಸಮಿತಿ ರಾಜ್ಯಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಆದೇಶ ಪತ್ರವನ್ನು ಬೆಂಗಳೂರು ಪಕ್ಷ ಕಚೇರಿಯಲ್ಲಿ ನೀಡಲಾಯಿತು.
ಕಳೆದ 32 ವರ್ಷಗಳಿಂದ ಜನತಾ ಪರಿವಾರದಲ್ಲಿ ತೊಡಗಿರುವ ಯೋಗೀಶ ಶೆಟ್ಟಿ, 2016ರಿಂದ ಜಿಲ್ಲಾಧ್ಯಕ್ಷರಾಗಿದ್ದಾರೆ.