ಕಾಪು | ಲೋಕಬಂಧು ನ್ಯೂಸ್
ಈ ಬಾರಿಯ ಬಜೆಟ್ನಲ್ಲಿಯೂ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಬಜೆಟ್ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ತಿಳಿಸಿದ್ದಾರೆ.
ಓಟ್ ಬ್ಯಾಂಕ್ ಮತ್ತು ಸ್ಥಳೀಯಾಡಳಿತ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ.
ಉಡುಪಿ ಜಿಲ್ಲೆಯನ್ನು ಕಡೆಗಣಿಸುತ್ತಿರುವುದು ಖಂಡನೀಯ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ. ಬೆಲೆ ಏರಿಕೆಗೆ ಕಡಿವಾಣ ಬೀಳಲಿದೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಎಂದು ಶಾಸಕ ಗುರ್ಮೆ ತಿಳಿಸಿದ್ದಾರೆ.
