ಬಡಾನಿಡಿಯೂರು ಕಡತ ವಿಲೇವಾರಿಗೆ ಸಿಎಸ್'ಗೆ ಪತ್ರ

ಲೋಕಬಂಧು ನ್ಯೂಸ್ ಉಡುಪಿ, ಮಾ.22
ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಸಂಬಂಧಿಸಿದ ಬಡಾನಿಡಿಯೂರು ಗ್ರಾಮದ  ನಿವೇಶನದ ಏಕ ವಿನ್ಯಾಸ ಕಡತದ ಶೀಘ್ರ ವಿಲೇವಾರಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.ಶಾಸಕ ಯಶಪಾಲ್ ಸುವರ್ಣ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ರಾಜಕೀಯ ಪ್ರೇರಿತ ಸುಳ್ಳು ಆರೋಪ ಮಾಡಿ, ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಬೆದರಿಕೆಯೊಡ್ಡಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿರುವ ಶಾಸಕ ಯಶಪಾಲ್ ಸುವರ್ಣ, ಕಾನೂನು ಪ್ರಕಾರ ಕಡತ ವಿಲೇವಾರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಕ್ಷಣ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.