ಲೋಕಬಂಧು ನ್ಯೂಸ್ | ಮಂಗಳೂರು, ಏ.8
ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ. ನಾಸೀರ್ ವಿರುದ್ಧ ಹಲವಾರು ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿದ್ದವು.
ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತು ಕಂಡುಬಂದಿರುವುದರಿಂದ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ದಕ್ಕೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪಕ್ಕದಲ್ಲಿರುವ ನದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದು ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
