ಲೋಕಬಂಧು ನ್ಯೂಸ್ | ಮಂಡ್ಯ, ಏ.15
ಅದಕ್ಕೂ ಮುನ್ನ ಪ್ರಧಾನಿ ಮೋದಿ ಜ್ವಾಲಾಪೀಠ (ಉರಿಗದ್ದುಗೆ)ಕ್ಕೆ ಭೇಟಿ ನೀಡಿದರು. ಇದು ಗುರು ಗೋರಖನಾಥರು ತಪಸ್ಸು ಮಾಡಿದ್ದ ಪವಿತ್ರ ಸ್ಥಳ ಎಂದು ನಂಬಲಾಗಿದೆ. ಅಲ್ಲಿ ದರ್ಶನ ಪಡೆದ ನಂತರ ಕ್ಷೇತ್ರದ ಅಧಿದೇವತೆ ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಭೈರವೈಕ್ಯ ಮೂಲಮಂದಿರದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ, ದೇವಾಲಯವನ್ನು ಸಾರ್ವಜನಿಕ ಲೋಕಾರ್ಪಣೆಗೊಳಿಸಿದರು.
ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ ಮೊದಲಾದವರಿದ್ದರು.
ಪ್ರಧಾನಿ ಭೇಟಿ ಶ್ರೀಕ್ಷೇತ್ರದ ಭಕ್ತರಲ್ಲಿ ಹೊಸ ಸಂಚಲನ ಮೂಡಿಸಿತು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
.jpg)
.jpg)
.jpg)
.jpg)