ಲೋಕಬಂಧು ನ್ಯೂಸ್ ಬೆಂಗಳೂರು, ಮೇ 27
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ (ಮೇ 28) ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ.ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಾಹಾರಕ್ಕೆ ಆಹ್ವಾನಿಸಿದ್ದಾರೆ. ಬ್ರೇಕ್ಫಾಸ್ಟ್ ಸಭೆಯ ಬಳಿಕ ಸಿಎಂ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ.