ಬಹುಕೋಟಿ ವಂಚಕ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅರೆಸ್ಟ್!

ಲೋಕಬಂಧು ನ್ಯೂಸ್ | ಉಡುಪಿ, ಜೂ.25
ಅನೇಕರಿಗೆ ಫ್ಲ್ಯಾಟ್‌ಗಳನ್ನು ಮಾರಾಟ ಮಾಡಿ ವಂಚಿಸಿದ್ದ ಬಹುಕೋಟಿ ವಂಚಕ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ ವಂಚನೆ ಪ್ರಕರಣದಲ್ಲಿ ಗ್ರಾಹಕ ನ್ಯಾಯಾಲಯ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.
ಉಡುಪಿ ನಗರದ ಹೃದಯಭಾಗದಲ್ಲಿ ಫ್ಲ್ಯಾಟ್ ಕಟ್ಟಿದ್ದು, ನಂತರ ಅದರ ಮಾಲೀಕತ್ವವನ್ನು ವಾರೀಸುದಾರರಿಗೆ ನೀಡುವಲ್ಲಿ ವಿಫಲರಾಗಿದ್ದರು. ನಮಗೆ ವಂಚಿಸಿದ್ದಾರೆ ಎಂದು ಫ್ಲ್ಯಾಟ್‌ಗೆ ಹೂಡಿಕೆ ಮಾಡಿದ್ದ ಗ್ರಾಹಕರು ನ್ಯಾಯಾಲಯದ ಮೆಟ್ಟಿಲೇರಿದ್ದರು‌.


ಅದಾದ ಬಳಿಕವೂ ಸಾಮಾಜಿಕ ಜಾಲತಾಣ ಹಾಗೂ ಕೇಂದ್ರದ ಬಿಜೆಪಿ ಸರಕಾರದ ವಿರುದ್ದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಮಹಿಳಾ ಠಾಣಾ ಪೋಲಿಸರು ಅವರನ್ನು ವಶಕ್ಕೆ ಪಡೆದು, ಹಾಜರುಪಡಿಸಿದ್ದಾರೆ.