ಲೋಕಬಂಧು ನ್ಯೂಸ್ | ಮಂಗಳೂರು, ಜೂ.13
ಕರಾವಳಿ ಜಿಲ್ಲೆಗಳ ಭೇಟಿಯಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಆಯ್ದ ಕೆಲವು ವ್ಯಾಪಾರ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದು ಆಂತರಿಕ ಸಮಾಲೋಚನೆಯಾಗಿದ್ದು, ಲಭ್ಯ ಮಾಹಿತಿ ಪ್ರಕಾರ ಕಸ್ಟಂಸ್ ಅಧಿಕಾರಿಗಳು ಈ ಸಭೆ ಆಯೋಜಿಸಿದ್ದರು.
ಕೇಂದ್ರ ಸರಕಾರ ಪ್ರಸಕ್ತದ ಮಧ್ಯಪ್ರಾಚ್ಯ ದೇಶಗಳ ಯುದ್ಧ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಇಸಿಎಲ್ ಜಿಎಸ್ (ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ) ಅಡಿಯಲ್ಲಿ ಯಾವುದೇ ಗ್ಯಾರಂಟಿ, ಅಡಮಾನ ಇಲ್ಲದೆ ಸಾಲದ ನೆರವು ಯೋಜನೆ ಘೋಷಿಸಿದ್ದರೂ ಅದಕ್ಕೆ ಕರ್ನಾಟಕದಲ್ಲಿ ಅನೇಕ ಬ್ಯಾಂಕ್ಗಳು ಆಸ್ತಿ ಲಿಂಕ್ ಮಾಡುವ ಮೂಲಕ ಉದ್ಯಮಿಗಳಿಗೆ ಹೊರೆಯಾಗುತ್ತಿರುವುದನ್ನು ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಕಾರಣಕ್ಕೂ ಬ್ಯಾಂಕ್ಗಳ ಇಂಥ ಕ್ರಮ ಸಹಿಸುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಪಡೆದು ಸ್ಪಷ್ಟ ಸೂಚನೆ ನೀಡಲಾಗುವುದು ಎಂದರು.
ಸಂಸದ ಕ್ಯಾ. ಬೃಜೇಶ್ ಚೌಟ, ಸಿಬಿಐಸಿ ಅಧ್ಯಕ್ಷ ವಿವೇಕ್ ಚತುರ್ವೇದಿ ಮತ್ತು ಸಿಬಿಐಸಿ ಸದಸ್ಯ ಯೋಗೇಂದ್ರ ಗರ್ಗ್, ಉದ್ಯಮಿಗಳು, ನಗರದ ಕೆಲವು ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಎನ್ಎಂಪಿಎಗೆ ಭೇಟಿ
ಇದೇ ಸಂದರ್ಭದಲ್ಲಿ ನವಮಂಗಳೂರು ಬಂದರಿಗೆ (ಎನ್ಎಂಪಿಎ) ಭೇಟಿ ನೀಡಿದ ಸಚಿವೆ ನಿರ್ಮಲಾ ಅಲ್ಲಿನ ಚಟುವಟಿಕೆಗಳು, ಮೂಲಸೌಕರ್ಯ ಇತ್ಯಾದಿಗಳ ಪರಿಶೀಲನೆ ನಡೆಸಿದರು.
