ಎಸ್ಐಆರ್ ಅರ್ಜಿ ಭರ್ತಿ ಮಾಡಿದ ಶಾಸಕ ಗುರ್ಮೆ

ಲೋಕಬಂಧು ನ್ಯೂಸ್ | ಕಾಪು, ಜು.6
ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಬಿಎಲ್ಓ ಸೋಮವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಗುರ್ಮೆ ಅವರು ತಮ್ಮ ಇಆರ್ ಫಾರ್ಮ್ ಭರ್ತಿ ಮಾಡಿ ಬಿಎಲ್ಓ ಅವರಿಗೆ ನೀಡಿದರು.
ಬಿಸಿಲು, ಮಳೆಯನ್ನೂ ಲೆಕ್ಕಿಸದೆ ತಮ್ಮ ಮನೆಗೆ ಬಿಎಲ್ಓ ಬಂದಾಗ ಅವರಿಗೆ ಅಗತ್ಯವಿರುವ ನಿಮ್ಮ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನೀಡಿ ಮತ್ತು ಅವರೊಂದಿಗೆ ಸೌಜನ್ಯಯುತವಾಗಿ ಮಾತನಾಡಿ ಸಹಕರಿಸುವಂತೆ ಶಾಸಕ ಗುರ್ಮೆ ಸುರೇಶ ಶೆಟ್ಟಿ ಅವರು ಕಾಪು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಈ ಸಂದರ್ಭದಲ್ಲಿ ಮನವಿ ಮಾಡಿದರು.