ಆ.20: ಆದರ್ಶ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಲೋಕಬಂಧು ನ್ಯೂಸ್ | ಉಡುಪಿ, ಆ.16
ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ವಿಭಾಗ, ಎಚ್.ಡಿ.ಎಫ್.ಸಿ. ಬ್ಯಾಂಕ್ ಉಡುಪಿ, ಎಸ್.ಡಿ.ಪಿಐ., ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಡುಪಿ ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 9ರಿಂದ ಅಪರಾಹ್ನ 2 ಗಂಟೆ ವರೆಗೆ ಇಲ್ಲಿನ ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
`ರಕ್ತದಾನ ಮಾಡಿ ಜೀವ ಉಳಿಸಿ' ಧ್ಯೇಯವಾಕ್ಯದೊಂದಿಗೆ ನಡೆಯುವ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ 9980258400 ಅಥವಾ 9663330864ನ್ನು ಸಂಪರ್ಕಿಸುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಪ್ರಕಟನೆ ತಿಳಿಸಿದೆ.