ವಕೀಲ, ನಿವೃತ್ತ ಬ್ಯಾಂಕರ್ ಜಯರಾಮ ಶೆಟ್ಟಿ ನಿಧನ

ಲೋಕಬಂಧು ನ್ಯೂಸ್ ಉಡುಪಿ, ಸೆ.14
ವಿಜಯಾ ಬ್ಯಾಂಕ್‌ ನಿವೃತ್ತ ಅಧಿಕಾರಿ ಇಂದ್ರಾಳಿ ನಿವಾಸಿ ಕೊಡಂಕೂರು ಜಯರಾಮ ಶೆಟ್ಟಿ (74) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು.ಬ್ಯಾಂಕ್‌ ಸೇವೆಯಿಂದ ನಿವೃತ್ತರಾದ ಬಳಿಕ ಉಡುಪಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು.


ಉಡುಪಿಯ ನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿದ್ದ ಅವರು, ಪ್ರಸ್ತುತ ನಿರ್ದೇಶಕರಾಗಿದ್ದರು.


ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ, ಲಯನ್ಸ್‌ ಕ್ಲಬ್ ಉಡುಪಿ- ಇಂದ್ರಾಳಿ ಅಧ್ಯಕ್ಷರೂ ಆಗಿದ್ದರು.


ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.