ಕಿನ್ನಿಮೂಲ್ಕಿ ಗಣೇಶೋತ್ಸವಕ್ಕೆ ಸಚಿವ ಲಾಡ್

ಲೋಕಬಂಧು ನ್ಯೂಸ್ | ಉಡುಪಿ, ಸೆ.20
ನಗರದ ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣಪತಿಕಟ್ಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಗೌರವಿಸಿದರು.
ಗಣೇಶೋತ್ಸವದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಚಿವರು ಕೆಲಕಾಲ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಮೃತಾ ಕೃಷ್ಣಮೂರ್ತಿ ಮೊದಲಾದವರಿದ್ದರು.